ರಫೇಲ್ ಯುದ್ಧ ವಿಮಾನ ಖರೀದಿ ಕುರಿತ ತನ್ನ ತೀರ್ಪಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರಮೋದಿ ವಿರುದ್ಧ ನೀಡಿದ್ದ ಹೇಳಿಕೆಗಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿಗೆ ಅವರಿಗೆ ಸುಪ್ರೀಂಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.ಈ ಮುನ್ನ ತಾನು ನೀಡಿರುವ ತೀರ್ಪನ್ನು ರಾಹುಲ್ ಗಾಂಧಿ ಅವರು ತಪ್ಪಾಗಿ ಅರ್ಥೈಸಿರುವುದಾಗಿ ನ್ಯಾಯಾಲಯ ತಿಳಿಸಿತ್ತು. ಬಿಜೆಪಿ ಸಂಸತ್ ಸದಸ್ಯೆ ಮೀನಾಕ್ಷಿಲೇಖಿ, ರಾಹುಲ್ಗಾಂಧಿ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ನ್ಯಾಯಾಂಗ ನಿಂದನೆ ಮೊಕದ್ದಮೆಯ ವಿಚಾರಣೆಯನ್ನು ಇದೇ ೩೦ರಂದು ಕೈಗೆತ್ತಿಕೊಳ್ಳುವುದಾಗಿ, ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ನೇತೃತ್ವದ ನ್ಯಾಯಪೀಠ ತಿಳಿಸಿದೆ. ಅದರೊಂದಿಗೆ ರಫೇಲ್ ಯುದ್ಧ ವಿಮಾನ ಖರೀದಿ ಪ್ರಕರಣಕ್ಕೆ ಸಂಬಂಧಿಸಿ, ಕಳೆದ ವರ್ಷ ಡಿಸೆಂಬರ್ನಲ್ಲಿ ನೀಡಿದ್ದ ತೀರ್ಪಿನ ಮರು ಪರಿಶೀಲನೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನೂ ನಡೆಸುವುದಾಗಿ ಸುಪ್ರೀಂ ಕೋರ್ಟ್ ನ್ಯಾಯಪೀಠ ತಿಳಿಸಿದೆ.