ನಾಲ್ಕನೇ ಹಂತದ ಲೋಕಸಭಾ ಚುನಾವಣೆಗೆ ಪ್ರಚಾರ ಕಾವೇರಿದೆ. ೯ ರಾಜ್ಯಗಳ ೭೧ ಲೋಕಸಭಾ ಕ್ಷೇತ್ರಗಳಿಗೆ ಈ ಹಂತದಲ್ಲಿ ಸೋಮವಾರ ಮತದಾನ ನಡೆಯಲಿದೆ. ವಿವಿಧ ಪಕ್ಷಗಳ ಪ್ರಮುಖ ನಾಯಕರು ತಮ್ಮ ಅಭ್ಯರ್ಥಿಗಳ ಪರ ಹಲವು ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಬಿರ್ ಬುಂ ಹಾಗೂ ನಾಡಿಯಾ ಜಿಲ್ಲೆಗಳಲ್ಲಿ ಹಾಗೂ ಜಾರ್ಖಂಡ್ನ ಲೋಹಾರ್ಡಗಾಗಳಲ್ಲಿ ಚುನಾವಣಾ ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಹಾರದ ಸಮಷ್ಟಿಪುರ, ಬೇಗುಸರಾಯ್ ಹಾಗೂ ಮುಂಗೇರ್ ಕ್ಷೇತ್ರಗಳಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಕ್ಷದ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲಕ್ಕೀಂಪುರ್ ಖೆರಿ, ಉನ್ನಾವೋ ಮತ್ತು ಕಾನ್ಪುರದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರಾ ಹಮೀರ್ ಪುರ ಮತ್ತು ಫತೇಪುರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ನಾಲ್ಕನೇ ಹಂತದ ಚುನಾವಣೆಯಲ್ಲಿ ಮಹಾರಾಷ್ಟ್ರದ ೧೭ ಲೋಕಸಭಾ ಕ್ಷೇತ್ರ, ಉತ್ತರ ಪ್ರದೇಶ ಹಾಗೂ ರಾಜಸ್ಥಾನದ ತಲಾ ೧೩, ಪಶ್ಚಿಮ ಬಂಗಾಳದ ೮, ಒಡಿಶಾ ಹಾಗೂ ಮಧ್ಯಪ್ರದೇಶದ ತಲಾ ೬, ಬಿಹಾರದ ೫ ಮತ್ತು ಜಾರ್ಖಂಡ್ನ ೩ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಒಡಿಶಾದ ೧೪೭ ವಿಧಾನಸಭಾ ಕ್ಷೇತ್ರಗಳ ಪೈಕಿ ೪೨ಕ್ಕೆ ಈ ಹಂತದಲ್ಲಿ ಮತದಾನ ನಡೆಯಲಿದೆ. ಆರನೇ ಹಂತದ ಚುನಾವಣೆಗೆ ನಾಮಪತ್ರಗಳ ಪರಿಶೀಲನೆ ಇಂದು ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ನಿನ್ನೆ ಕೊನೆಯದಿನವಾಗಿತ್ತು. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಶುಕ್ರವಾರ ಕೊನೆಯ ದಿನವಾಗಿದೆ.ಆರನೇ ಹಂತದಲ್ಲಿ ಮೇ ೧೨ರಂದು ಏಳು ರಾಜ್ಯಗಳ ೫೧ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.